Tuesday, January 29, 2008

ಒಂದು ಪ್ರತಿಕ್ರಿಯೆ..

ದು ಬೇಸರದ ಸಂಗತಿ. 2008 ಡಿಸೆಂಬರ್ ಹೊತ್ತಿಗಾದರೂ 75ನೇ ಕನ್ನಡ ಸಾಹಿತ್ಯ ಸಮ್ಮೇಳನ ನೆಡಯಬೇಕಿದೆ. ಆದರೆ ಇನ್ನೂ ತಯಾರಿಯ ಮಾತಿಲ್ಲ. ತಯಾರಿ ಮಾತಿರಲಿ, ನಡೆಯುತ್ತದಾ ಎಂಬುದರ ಬಗ್ಗೆ ಸಂಶಯದ ಮಾತುಗಳು ದುರ್ಗದ ಗಲ್ಲಿಗಲ್ಲಿಗಳಲ್ಲಿ ಕೇಳಿಬರುತ್ತಿರುವುದು ಬೇಸರದ ಸಂಗತಿ. ಚಿತ್ರದುರ್ಗದ ಜನತೆಗೆ ನೆನಪಿರಬಹುದು. ಕೇವಲ ಎರಡು ವರ್ಷಗಳ ಹಿಂದೆ ಚಿತ್ರದುರ್ಗ ಸಿರಿಗೆರೆ ಶ್ರೀಗಳ ತರಳಬಾಳು ಹುಣ್ಣಿಮೆ ಕಾರ್ಯಕ್ರಮ ನಡೆದಿತ್ತು. ಅದ್ಧೂರಿ ಕಾರ್ಯಕ್ರಮ. ನೂರಾರು ಗಣ್ಯರು ದೂರದ ಊರುಗಳಿಂದ ಭಾಗವಹಿಸಿದರು.
ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆದಾಗ ಭೀಮಸಮುದ್ರದ ಮೂವರು 'ರಾಜಕಾರಣಿ ಕಂ ಅಡಿಕೆ ಧಣಿಗಳು' ತಲಾ ಒಂದೊಂದು ಕೋಟಿ ರೂಗಳನ್ನು ಹುಣ್ಣಿಮೆ ಕಾರ್ಯಕ್ರಮಕ್ಕಾಗಿ ಹೊಂದಿಸುವ ಆಶ್ವಾಸನೆಯನ್ನು ಸಿರಿಗೆರೆ ಶ್ರೀಗಳಿಗೆ ನೀಡಿದ್ದರು. ಅಂತೆಯೇ ನಡೆದುಕೊಂಡರು. ಆದರೆ ಚಿತ್ರದುರ್ಗದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುವುದು ಖಾತ್ರಿಯಾಗಿ ತಿಂಗಳಾದರೂ ಯಾವ ರಾಜಕಾರಣಿಯೂ, ಹಣ ಹೊಂದಿಸುವುದಿರಲಿ, ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವ ಉತ್ಸಾಹ ತೋರುತ್ತಿಲ್ಲ.ಇದು ದೌರ್ಭಾಗ್ಯದ ಸಂಗತಿ. ಮಠದ ಕಾರ್ಯಕ್ರಮಕ್ಕೆ ಹಣ ಹೊಂದಿಸಿದರೆ ಶ್ರೀಗಳ ಆಶೀರ್ವಾದ ಆ ಮೂಲಕ ಜನರ ಮತ ಕಟ್ಟಿಟ್ಟಬುತ್ತಿ. ಸಾಹಿತ್ಯ ಸಮ್ಮೇಳನದಿಂದ ತಮಗೇನೂ ದಕ್ಕುವುದಿಲ್ಲ ಎಂಬ ಅಭಿಪ್ರಾಯ ಅವರದಿರಬಹುದು.
ಸಾಹಿತ್ಯ ಸಮ್ಮೇಳನದಿಂದ ಚಿತ್ರದುರ್ಗ ಪ್ರವಾಸೋದ್ಯಮ ತಾಣವಾಗಿ ಗಮನ ಸೆಳೆಯುತ್ತದೆ. ಪ್ರವಾಸಿಗಳು ಹೆಚ್ಚಾದರೆ ದುರ್ಗದ ಸಣ್ಣ ವ್ಯಾಪಾರಿಗಳಿಗೆ ಆದಾಯ ದೊರಕುತ್ತೆ. ಆದರೆ ಇದಾವುದೂ ಇವರಿಗೇಕೆ ಅರ್ಥವಾಗುತ್ತಿಲ್ಲ.ರಾಜಕಾರಣಿಗಳು ಸಮ್ಮೇಳನಕ್ಕಾಗಿ ತಮ್ಮ ಕಿಸೆಯಿಂದ ರೊಕ್ಕ ನೀಡಬೇಕಿಲ್ಲ. ರಾಜ್ಯ ಸರಕಾರ, ಜಿಲ್ಲಾ ಪಂಚಾಯತ್, ನೌಕರರ ಸಂಘ ಹಾಗೂ ಇತರೆ ಸಂಥ ಸಂಸ್ಥೆಗಳಿಂದ ಹಣ ಹೊಂದಿಸುವ ಕೆಲಸ ಮಾಡಬೇಕಿದೆ. ಹಣಕ್ಕಿಂತ ಮುಖ್ಯವಾಗಿ ಸಮರ್ಥ ನೇತೃತ್ವ ವಹಿಸಿ ಸಮ್ಮೇಳನ ಯಶಸ್ವಿ ಮಾಡಬೇಕಾಗಿದೆ.
ಈಗ ಎಂಎಲ್ಎಗಳೆಲ್ಲ ಮಾಜಿ. ಹಾಲಿ ಇದ್ದಾಗಲೂ ಮಾಡಿದ್ದೆಷ್ಟು ಎನ್ನುವುದು ಚರ್ಚೆ ಮಾಡಬೇಕಾದ್ದೇ. ಅದಿರಲಿ, ಇನ್ನೂ ತಮ್ಮ ಸ್ಥಾನ ಭದ್ರವಾಗಿಟ್ಟುಕೊಂಡಿರುವ ಎಂಪಿ ಹಾಗೂ ಎಂಎಲ್ಸಿಗಳು ಮಾಡುತ್ತಿರುವುದೇನು?-
ಸತ್ಯ, ಬಾಪುದೇವರ ಹಟಿ

No comments: