Sunday, December 7, 2008

ನಾಚಿಕೆಯಾಗಿದೆ... ಬೇಸರವಾಗಿದೆ..

ಎರಡು ತಿಂಗಳ ಮೇಲಾಯ್ತು. ದಿಢೀರನೆ ಒಂದು ಪೋಸ್ಟ್ ಅಪ್ ಡೇಟ್ ಆಗಿದೆ. ಒಂದು ಸಮಜಾಯಿಷಿ ಇಲ್ಲ. ಕ್ಷಮೆ ಕೇಳಲಿಲ್ಲ. ದೊಡ್ಡ ದೊಡ್ಡ ಮಾತಿನಿಂದ ಆರಂಭವಾಗಿ ಹೀಗೆ ಅನಾಥವಾಗಿ ಬಿಟ್ಟು ಹೋದರೆಂದು ಕಡೆಯ ಪಕ್ಷ ಒಂದಿಬ್ಬರಾದರೂ ಬೈದುಕೊಂಡಿರಬಹುದು.
ಅದೆಲಕ್ಕೂ ನಾವೂ ಭಾಜನರು. ನಮ್ಮಿಂದ ಆದ ಲೋಪಕ್ಕೆ ನಾವು ಮತ್ತೊಮ್ಮೆ ಕ್ಷಮೆ ಕೇಳುತ್ತೇವೆ.
ಕ್ಷಮೆ ಕೇಳಲೇ ಬೇಕಾದ ಮತ್ತೊಂದು ಕಾರಣವೂ ಇದೆ. 75ನೇ ಅಮೃತ ಮಹೋತ್ಸದ ಸಾಹಿತ್ಯ ಸಮ್ಮೇಳನವನ್ನು ನೆರವೇರಿಸುವುದಕ್ಕೆ ನಮ್ಮ ಜಿಲ್ಲೆ ಜನಪ್ರತಿ ನಿಧಿಗಳು, ಮುಖಂಡರು, ಮಠಾಧೀಶರು ಹಿಂದೇಟು ಹಾಕಿದ್ದು, ಮುಂದೂಡಿ ಕೇಳಿಕೊಂಡಿದ್ದು, ಕಡೆಗೆ ನೀವು ಮಾಡದಿದ್ದರೆ ಇನ್ನೊಬ್ಬರಿಗೆ ಕೊಡುತ್ತೇವೆಂಬ ಧಮಕಿಗೆ ಹೆಸರಿ ನಿಗದಿತ ದಿನಕ್ಕೆ ಸಮ್ಮೇಳನ ಮಾಡುತ್ತೇವೆಂದು ಘೋಷಿಸಿದ್ದು ಇದೆಲ್ಲಕ್ಕೂ ಕ್ಷಮೆ ಕೇಳುತ್ತೇವೆ.
ಸಾಹಿತ್ಯ ಸೇವೆ ಮಾಡುತ್ತೇವೆ ನಾ ಮುಂದು ತಾಮುಂದು ತುದಿಗಾಲಲ್ಲಿ ನಿಲ್ಲುವ ಜಿಲ್ಲೆಗಳಿವೆ. ಸಾಂಸ್ಕೃತಿಕವಾಗಿ ಗುರುತಿಸಿಕೊಂಡ ಚಿತ್ರದುರ್ಗ ಜಿಲ್ಲೆ ಈ ವಿಷಯದಲ್ಲಿ ತೀರ ಸಣ್ಣದಾಗಿ ನಡೆದುಕೊಂಡಿತು ನಮ್ಮ ಅಭಿಪ್ರಾಯ. ಸಮ್ಮೇಳನದಲ್ಲಿ ಪ್ರಮುಖ ಪಾತ್ರವಹಿಸಬಹುದಾದರು ತಮ್ಮ ಒಣ ಪ್ರತಿಷ್ಠೆಗಾಗಿ ಸಮ್ಮೇಳನವನ್ನು ಮುಂದೂಡುವ, ಬೇರೊಂದು ಜಿಲ್ಲೆಗೆ ಸ್ಥಳಾಂತರಿಸುವುದಕ್ಕೆ ಅವಕಾಶವಾಗುವುದಕ್ಕೆ ಪ್ರೇರಣೆಯಾದರು ಎಂಬುದು ನಮಗೆ ನೋವುಂಟು ಮಾಡಿದ ಸಂಗತಿ.
ಇಂಥ ಬೆಳವಣಿಗೆಗಳು ನಮ್ಮ ಉತ್ಸಾಹಕ್ಕೆ ತಣ್ಣೀರು ಹಾಕಿ ಸುಮ್ಮನಿರಿಸಿದವು.
ಈಗ ದಿನಗಣನೆ ಆರಂಭವಾಗಿದೆ. 2009ರ ಜನವರಿ 29ರಿಂದ ಫೆಬ್ರವರಿ 1ರವರೆಗೆ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಸಿದ್ಧತೆ ಆರಂಭವಾಗಿದೆ. ಹೆಚ್ಚು ದಿನಗಳಿಲ್ಲ. ಸಮ್ಮೇಳನಕ್ಕೆ ಅಗತ್ಯವಾಗಿರುವ ಮೂಲಭೂತ ವ್ಯವಸ್ಥೆಗಳನ್ನು ಮಾಡಬೇಕಿದೆ.ಈ ಪ್ರಕ್ರಿಯೆಗಳು ನಿಧಾನವಾಗಿ ಚುರುಕಾಗುತ್ತಿವೆ!
ಆಗಲಿ...
ಸಮಾಧಾನದ ಸಂಗತಿಯೊಂದಿದೆ:
ಚಿತ್ರದುರ್ಗದಲ್ಲಿ ನಡೆಯದೇ ಹೋಗಿದ್ದರೆ, ಸಮ್ಮೇಳನ ಬಳ್ಳಾರಿಗೆ ಹೋಗುತ್ತಿತ್ತು. ಬಳ್ಳಾರಿಯವರು ನಿಗದಿತ ದಿನದಂದೇ ಸಮ್ಮೇಳನ ನೆರವೇರಿಸುವ ಭರವಸೆ ನೀಡಿ ಅವಕಾಶ ಮಾಡಿಕೊಡಲು ಕೇಳಿಕೊಂಡಿದ್ದರು. ಗಣಿಧಣಿಗಳ ಊರಿನಲ್ಲಿ ಸಮ್ಮೇಳನ ಅದ್ದೂರಿಯಾಗಿ ಆಗುತ್ತದೆ, ಅಲ್ಲೇ ಆಗಲಿ ಎಂದು ಕೆಲವರು ತಾಳ ಹಾಕಿದರು.
ಹಾಗೇನಾದರೂ ಆಗಿದ್ದರೆ, ಸಮ್ಮೇಳನ, ಮೊನ್ನೆ ಮೊನ್ನೆ ನಡೆದ ಹಂಪಿ ಉತ್ಸವದ ಹಾಗೇ ಆಗಿ ಹೋಗುತ್ತಿತ್ತು. ಸಾಹಿತ್ಯದ ಜತೆಗೆ ಸಮಾಜ,ಸಂಸ್ಕೃತಿಗಳ ಚರ್ಚೆಯಾಗಬೇಕಾದ ವೇದಿಕೆಯಲ್ಲಿ ಒಂದು ಕವಿಗಳ ಪದ್ಯಗಳನ್ನು ಹಾಡಿಸಿಯೇ ಸಮ್ಮೇಳನ ಮುಗಿಸಿ ಬಿಡುತ್ತಿದ್ದರೇನೋ ಗಣಿಧಣಿಗಳು.
ಹಂಪಿ ಉತ್ಸವದಲ್ಲಿ ಇವರು ಮಾಡಿದ್ದೇನು? ಸೋನು ನಿಗಮ್, ಆಶಾರನ್ನು ಕರೆಸಿ ಹಾಡಿಸಿದರು. ಸದ್ಯದ ಅಂಥದ್ದಕ್ಕೆ ಅವಕಾಶವಾಗಿಲ್ಲ.
ಬೇಸರದ ಸಂಗತಿ ಇದೆ:
ರಾಜ್ಯ ಸರ್ಕಾರ ಸಮ್ಮೇಳನಕ್ಕೆ ಒಂದು ಕೋಟಿ ರು.ಗಳನ್ನು ಮಂಜೂರು ಮಾಡಿದೆ. ಕನ್ನಡದ ಕಾರ್ಯವೆಂದು ಬಾಯ್ತುಂಬು ಹೇಳಿಕೊಳ್ಳುವ ಸರ್ಕಾರದ ಮಂದಿ ಬೆಂಗಳೂರು ಹಬ್ಬದಂಥ ಮನರಂಜನೆಯೇ ಕೇಂದ್ರವಾಗಿರುವಂಥ ಕಾರ್ಯಕ್ರಮಕ್ಕೆ 2.5 ಕೋಟಿ ಮಂಜೂರು ಮಾಡಿತ್ತು.
ಯಾಕೆ ಹೀಗೆ..?

2 comments:

Anonymous said...

75 All Indian Kannada Meet is only in the media, city is flooded with the greedy persons for the name not for giving fame to city's first Kannada Meet in the history....

Anonymous said...

durgada hudugarige shubhashaya. bere blog nodutiddaga e blog nodi santhoshavahitu. namma urina sammelanada sandarbhadalli iddondu olle prayatna. blognalli ekanthi, nayakanahatti jatre varadi nannannu urina kade hoguvante maditu. nannu hiriyurina harthikote urinava. UDAYAVANI yalli varadigara. bangalorenallidene.
RUDRANNA