Friday, December 19, 2008

ಸಮ್ಮೇಳನಾಧ್ಯಕ್ಷರು ಡಾ.ಎಲ್. ಬಸವರಾಜು

75ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆಯಾಗಿದೆ. ಹಿರಿಯ ಚಿಂತಕ ಡಾ.ಎಲ್.ಬಸವರಾಜು ಅವರು ಸಮ್ಮೇಳಾಧ್ಯಕ್ಷರ ಸ್ಥಾನ ವಹಿಸಿಕೊಳ್ಳಲಿದ್ದಾರೆ. ವಚನ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಇವರು ಅಪ್ಪಟ ಮಾನವತವಾದಿ. ಜಾತಿ, ಕಂದಾಚಾರ, ಪುರೋಹಿತಷಾಹಿ ವ್ಯವಸ್ಥೆಯನ್ನು ಧಿಕ್ಕರಿಸುತ್ತಾ ಬಂದ ಬಸವಣ್ಣ ಮತ್ತು ಆತನ ಸಹೋದರ ಶರಣರ ಚಿಂತನೆಗಳನ್ನು ಅಧ್ಯಯನ ಮಾಡಿದವರು ಬಸವರಾಜು. ಈ ಹೊತ್ತಿನಲ್ಲಿ ಅಂಥ ಚಿಂತನೆಗಳ ಅಗತ್ಯವಿದೆ. ಜಾತಿ, ಧರ್ಮಗಳಿಗಿಂತ ಮಿಗಿಲಾದ ಮಾನವತೆಯನ್ನು ಪ್ರತಿಪಾದಿಸಬೇಕಿದೆ. ಈ ಸಂದರ್ಭಧಲ್ಲಿ ಎಲ್. ಬಸವರಾಜು ಅವರು ಆಯ್ಕೆಯಾಗಿರುವುದು ದುರ್ಗದ ಹುಡುಗರಿಗೂ, ದುರ್ಗದ ಜನತೆಗೆ ಸಂತೋಷ ತಂದಿದೆ.
ಬಸವರಾಜು ಅವರ ಸಣ್ಣ ಪರಿಚಯ:
ಡಾ ಎಲ್.ಬಸವರಾಜು ಇವರು ೧೯೧೯ ಅಕ್ಟೋಬರ ೫ರಂದು ಕೋಲಾರ ಜಿಲ್ಲೆಯ ಎಡಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ವೀರಮ್ಮ ; ತಂದೆ ಲಿಂಗಪ್ಪ.ವೃತ್ತಿಯಿಂದ ಪ್ರಾಧ್ಯಾಪಕರಾದರೂ,ತಮ್ಮ ಜೀವನದ ಬಹುಪಾಲು ಅವಧಿಯನ್ನು ಕನ್ನಡ ಕವಿ,ವೀರಶೈವ ಸಾಹಿತ್ಯ-ಸಿದ್ಧಾಂತಗಳ ಶೋಧನೆ,ಅಧ್ಯಯನ,ವ್ಯಾಖ್ಯಾನ,ಸಂಪಾದನೆಗಳಲ್ಲಿ ಕಳೆದಿದ್ದಾರೆ.ಅಪ್ಪಟ ಮಾನವತಾವಾದಿ.
ಇವರ ಕೆಲವು ಪ್ರಮುಖ ಕೃತಿಗಳು:
ಶೂನ್ಯ ಸಂಪಾದನೆ
ಕನ್ನಡ ಛಂದಸ್ಸು
ಶಿವದಾಸ ಗೀತಾಂಜಲಿ
ಭಾಸನ ಭಾರತ ರೂಪಕ
ನಾಟಕಾಮೃತ ಬಿಂದುಗಳು
ಅಲ್ಲಮನ ವಚನಗಳು
ದೇವರ ದಾಸೀಮಯ್ಯನ ವಚನಗಳು
ಭಾಸರಾಮಾಯಣ
ನಾಟಕ ತ್ರಿವೇಣಿ
ಇವರಿಗೆ 'ಪಂಪ ಪ್ರಶಸ್ತಿ','ಬಸವ ಪುರಸ್ಕಾರ' ವಲ್ಲದೆ ೧೯೯೪ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೦೬ರ 'ಭಾಷಾ ಸಮ್ಮಾನ್' ಗೌರವ ದೊರಕಿದೆ.

4 comments:

Anonymous said...

ಇವತ್ತನ ಪರಿಸ್ಟಿತಿಯಲ್ಲಿ ಇದಕ್ಕಿಂತ ಸಂತಸ ಇನ್ನೇನು ಬೇಕು......?
ಹಾಲ

nirusha said...

L Basavaraju avara ayke tumba kushi kottide. sammelana yashswiyagali endu haraisutteve.

Anonymous said...

durgada hudugara horatakke sanda jaya idu. innu sammelana yava riti irabeku emba bage swalpa charche agali. bari sahitya kuritu kuttuvudakkinta vibbina neleyalli nadeyali

Anonymous said...

durgada hudagara e habba namma kannadada habba.e samskruthika nagariyalli sammelanakke 75 varsha kayabekaytalla. aadaru Dr. L.Basavaraju avarantaha chintana chetanada sarathya odagiddu bhagya. kelavomme intaha bhagyakke kayalebeku. innu janavari 29 kke kayodu.
anand rugvedi